ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯಸರ್ಕಾರ 4 ಸಾವಿರ ರೂ. ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಘೋಷಿಸಿದ್ದಾರೆ. ಆದರೆ, ಯೋಜನೆ ಜಾರಿಗಾಗಿ 2200 ಕೋಟಿ ರೂ. ಗಳ ಅನುದಾನದ ಅಗತ್ಯವಿದೆ. ಮಧ್ಯಂತರ ಆರ್ಥಿಕ ವರ್ಷದಲ್ಲಿ ದೊಡ್ಡ ಮೊತ್ತದ ಅನುದಾನ ಕ್ರೊಢೀಕರಣ ಕಷ್ಟಸಾಧ್ಯವಾಗಿದೆ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ.