ಬೆಂಗಳೂರು: ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ, 370ನೇ ವಿಧಿ ರದ್ದಾಯಿತು, ಇನ್ನಾದರೂ ದೇಶದ ಆರ್ಥಿಕತೆಯತ್ತ ಗಮನ ಹರಿಸಿ ಪ್ರಧಾನಿಗಳೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕ್ರಮವನ್ನು ಟೀಕಿಸಿ ಅವರು ಸರಣಿ ಟ್ವೀಟ್ ಮಾಡಿದ್ದು ಕಾಶ್ಮೀರ ವಿಚಾರ ಬಿಟ್ಟು ಕುಸಿಯುತ್ತಿರುವ ದೇಶದ ಆರ್ಥಿಕತೆಯತ್ತ ಗಮನಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ.