ನನ್ನ ನೇತೃತ್ವದ ಹಿಂದಿನ ಸರ್ಕಾರದಲ್ಲಿ ಎಲ್ಲಾ ಶಾಸಕರಿಗೆ ಮತ್ತು ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆ. 14 ತಿಂಗಳು ಈ ಶಾಸಕರುಗಳ ಮತ್ತು ಮೈತ್ರಿಪಕ್ಷ ಕಾಂಗ್ರೆಸ್ ನ ಜೀತದಾಳುವಿನಂತೆ ಕೆಲಸ ಮಾಡಿದ್ದೆ. ಹೀಗಿರುವಾಗ ಅವರು ನನ್ನ ಮೇಲೆ ಏಕೆ ಆರೋಪ ಹೊರಿಸುತ್ತಾರೆ ಎಂದು ಗೊತ್ತಾಗುತ್ತಿಲ್ಲ, ಸರ್ಕಾರ ಪತನಕ್ಕೆ ಎಲ್ಲರೂ ನನ್ನತ್ತಲೇ ಬೊಟ್ಟು ಮಾಡುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.