ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆಂದು ಕೆಲವರು ಬೆಟ್ಟಿಂಗ್ ಕಟ್ಟಿದ್ದರು. 100 ಕೋಟಿ ರೂ.ಗೂ ಹೆಚ್ಚು ಹಣ ಬೆಟ್ಟಿಂಗ್ ಕಟ್ಟಿದ್ದರು. ಆದರೆ ಚುನಾವಣೆಯಲ್ಲಿ ನಿಖಿಲ್ ಸೋತಿದ್ದರಿಂದ ಹಲವಾರು ಕುಟುಂಬಗಳು ಹೊಲ, ಮನೆ, ಆಸ್ತಿ, ವಾಹನ, ಜಾನುವಾರುಗಳನ್ನು ಕಳೆದುಕೊಂಡು ಬೀದಿಗೆ ಬಂದಿವೆ. ಇದೆಲ್ಲವನ್ನೂ ನಾನು ಗಮನಿಸಿದ್ದೇನೆ. ರೈತರ ಸಾಲಮನ್ನಾ ಒಂದೇ ಅಲ್ಲದೆ ಋಣಪರಿಹಾರ ಕಾಯ್ದೆ ಜಾರಿಗೆ ತರುವ ಮೂಲಕ ಕೃಷಿ ಕಾರ್ಮಿಕರು ಹಾಗೂ ಬಡವರ ರಕ್ಷಣೆಗೆ ಮುಂದಾಗಿದ್ದೇವೆ ಎಂದರು.