ಕರ್ನಾಟಕ ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗಿದ್ದು, ಕರ್ನಾಟಕ ನೀರಿನಲ್ಲಿ ಮುಳುಗಿದೆ. ಮತದಾರರು ಕಣ್ಣೀರಿನಲ್ಲಿ ಮುಳುಗಿದ್ದಾರೆ. ಬಿಜೆಪಿ, ಆರ್ ಎಸ್ ಎಸ್ ನವರು ಅಧಿಕಾರ ಹಂಚಿಕೆಯ ಕಿತ್ತಾಟದಲ್ಲಿ ಮುಳುಗುದ್ದಾರೆ ಎಂದು ಟೀಕಿಸಿದೆ.ಮಾಧ್ಯಮದವರು ಕಾಶ್ಮೀರದಲ್ಲಿ ಮುಳುಗಿದ್ದಾರೆ. ಏಕವ್ಯಕ್ತಿಯ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಯುತ್ತಿರಿ, ರಾಜ್ಯ ಸರ್ಕಾರ ಶವವಾಗಿ ತೇಲಲಿದೆ ಎಂದು ಟ್ವೀಟರ್ ನಲ್ಲಿ ಕಾಂಗ್ರೆಸ್ ಹೇಳಿದೆ.