ಜನರಿಗೆ 'ಪ್ರವಾಹ' ಪ್ರಾಣಸಂಕಟ: ದಿಲ್ಲಿಯಲ್ಲಿ ಸಂಸದರಿಗೆ ಭೋಜನಕೂಟ; ವಿಪಕ್ಷಗಳ ಕೆಂಗಣ್ಣಿಗೆ ಬಿಎಸ್ ವೈ ಗುರಿ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಜನ ಕಂಗೆಟ್ಟಿದ್ದಾರೆ. ಪರಿಸ್ಥಿತಿ ತೀರಾ ಹದಗೆಟ್ಟಿರುವಾಗ ಮುಖ್ಯಮಂತ್ರ ಬಿಎಸ್ ಯಡಿಯೂರಪ್ಪ ದೆಹಲಿಗೆ ಹೋಗಿ ಕುಳಿತಿರುವುದು ವಿಪಕ್ಷಗಳ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಜನ ಕಂಗೆಟ್ಟಿದ್ದಾರೆ. ಪರಿಸ್ಥಿತಿ ತೀರಾ ಹದಗೆಟ್ಟಿರುವಾಗ ಮುಖ್ಯಮಂತ್ರ ಬಿಎಸ್ ಯಡಿಯೂರಪ್ಪ ದೆಹಲಿಗೆ ಹೋಗಿ ಕುಳಿತಿರುವುದು ವಿಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದೆ.
ಈ ಸಂಬಂಧ ಪತ್ರ ಬರೆದಿರುವ ಮಾಜಿ ಸಚಿವ ಎಚ್.ಕೆ ಪಾಟೀಲ್, ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಗಮನ ಹರಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಸಿಎಂ ಯಡಿಯೂರಪ್ಪ ರಾಜ್ಯ ಸಂಸದರಿದೆ ಭೋಜನ ಕೂಟ ಏರ್ಪಡಿಸಿದ್ದರು, ಈ ಭೋಜನ ಕೂಟದಲ್ಲಿ ರಾಜ್ಯದ 28 ಸಂಸದರು ಭಾಗವಹಿಸಿದ್ದರು.
ರಾಜ್ಯದ ಪ್ರವಾಹ ಹಾಗೂ ಇತರ ಯೋಜನೆಗಳ ಸಂಬಂಧ ಚರ್ಚಿಸಲು ಮತ್ತು ರಾಜ್ಯ ಮತ್ತು ಕೇಂದ್ರದ ಸಮನ್ವಯ ಸಂಬಂಧ ಚರ್ಚಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದರೊಬ್ಬರು ತಿಳಿಸಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com