ನೆರೆ ಸಂತ್ರಸ್ತರಿಗೆ  ಮನೆ ನಿರ್ಮಿಸಿಕೊಡದಿದ್ದಲ್ಲಿ ಸರ್ಕಾರ ಪತನ: ಬಿಜೆಪಿ ಶಾಸಕ 

ನೆರೆ ಸಂತ್ರಸ್ತರಿಗ ರಾಜ್ಯಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಸರ್ಕಾರವನ್ನೇ ಪತನಗೊಳಿಸುತ್ತೇವೆ ಎಂದು ಬಿಜೆಪಿ ಶಾಸಕ  ಬಾಲಚಂದ್ರ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ನೆರೆ ಸಂತ್ರಸ್ತರಿಗೆ  ಮನೆ ನಿರ್ಮಿಸಿಕೊಡದಿದ್ದಲ್ಲಿ ಸರ್ಕಾರ ಪತನ: ಬಿಜೆಪಿ ಶಾಸಕ 

ಚಿಕ್ಕೋಡಿ:  ನೆರೆ ಸಂತ್ರಸ್ತರಿಗ ರಾಜ್ಯಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಸರ್ಕಾರವನ್ನೇ ಪತನಗೊಳಿಸುತ್ತೇವೆ ಎಂದು ಬಿಜೆಪಿ ಶಾಸಕ  ಬಾಲಚಂದ್ರ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನೆರೆ ಪೀಡಿತ ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಚರ್ಚಿಸುವ ವೇಳೆಯಲ್ಲಿ ಇಂತಹದ್ದೊಂದು ಹೇಳಿಕೆ ನೀಡುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಸರ್ಕಾರ ಮನೆ ನಿರ್ಮಿಸಿಕೊಡಬೇಕು, ಇಲ್ಲವಾದಲ್ಲಿ ಈ ಸರ್ಕಾರವನ್ನು ಉಳಿಸುವುದಿಲ್ಲ. ನಿಮಗೆ ಮನೆ ಕಟ್ಟಿಸಿಕೊಡುವ ಜವಾಬ್ದಾರಿ ನಮ್ಮದು ಎಂದು ನೆರೆ ಸಂತ್ರಸ್ತರಿಗೆ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದ್ದಾರೆ.

ಸಚಿವ ಸ್ಥಾನ ಸಿಗದೆ ಅಣ್ಣಾ ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಈಗ  ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡದಿದ್ದಲ್ಲಿ ಸರ್ಕಾರ ಪತನಗೊಳಿಸುವುದಾಗಿ ಆಡಳಿತಾರೂಢ ಪಕ್ಷದ ಶಾಸಕ ಹಾಗೂ ರಮೇಶ್ ಜಾರಕಿಹೊಳಿ ತಮ್ಮ ಬಾಲಚಂದ್ರ ಜಾರಕಿಹೊಳಿ ಹೇಳುವ ಮೂಲಕ ಸರ್ಕಾರಕ್ಕೆ ಆರಂಭದಲ್ಲಿಯೇ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com