ಪ್ರವಾಹ ಪರಿಹಾರಕ್ಕಾಗಿ ಯಡಿಯೂರಪ್ಪರಿಂದ 'ದಂಡ'ಯಾತ್ರೆ: ಕಾಂಗ್ರೆಸ್ ಲೇವಡಿ

ಯಡಿಯೂರಪ್ಪ ಬೆಂಗಳೂರಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ "ದಂಡ"ಯಾತ್ರೆ ಮಾಡುತ್ತಿದ್ದಾರೆ, ರಾಜ್ಯದ ಜನರ ಬದುಕಿನಲ್ಲಿ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಚೆಲ್ಲಾಟವಾಡುತ್ತಿದ್ದಾರೆ ...
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು; ಯಡಿಯೂರಪ್ಪ ಬೆಂಗಳೂರಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ "ದಂಡ"ಯಾತ್ರೆ ಮಾಡುತ್ತಿದ್ದಾರೆ, ರಾಜ್ಯದ ಜನರ ಬದುಕಿನಲ್ಲಿ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಚೆಲ್ಲಾಟವಾಡುತ್ತಿದ್ದಾರೆ ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಸ್ಥಿತಿ ನೋಡಿದರೆ ಗಾಬರಿಯಾಗುತ್ತಿದ್ದು, ಅವರ ಸ್ವಾಭಿಮಾನ ಶೂನ್ಯ ಮಟ್ಟಕ್ಕೆ ಇಳಿದಿದೆ. ಯಡಿಯೂರಪ್ಪ ಬೆಂಗಳೂರಿನಿಂದ ದೆಹಲಿಗೆ, ದೆಹಲಿಯಿಂದ ಬೆಂಗಳೂರಿಗೆ ದಂಡಯಾತ್ರೆ ಮಾಡುತ್ತಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳನ್ನು ದೆಹಲಿ ದೊರೆಗಳು ಈ ರೀತಿ ದಂಡೆಯಾತ್ರೆ ಮಾಡಿಸುತ್ತಿರುವುದು ಇದೆ ಮೊದಲು. ಮುಖ್ಯಮಂತ್ರಿ ಅವರು ಮಾಡು ಇಲ್ಲವೇ ಮಡಿ ಎಂಬಂತಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಕರ್ನಾಟಕದಲ್ಲಿ ಪ್ರವಾಹದಿಂದ ಸಂಭವಿಸಿರುವ ನಷ್ಟವನ್ನು ಸರಿದೂರಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿಫಲವಾಗಿದ್ದಾರೆ. ಶಿವಮೊಗ್ಗದಲ್ಲಿ ನಷ್ಟದ ಅಂದಾಜು ಕೇಳಿದರೆ ಹಣ ಮುದ್ರಿಸುವ ಯಂತ್ರವಿಲ್ಲ ಎನ್ನುತ್ತಾರೆ. ಬಿಜೆಪಿ ನಾಯಕರ ಬಳಿಕ ಹಣ ಎಣಿಸುವ ಯಂತ್ರಗಳಷ್ಟೆ ಇರುವುದು ಹಣ ಮುದ್ರಿಸುವ ಯಂತ್ರಗಳು ಇಲ್ಲ ಎಂದು ಅವರು ಲೇವಡಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com