ಹಾಸನ: ದೇವರ ಅನುಗ್ರಹದಿಂದ ಕುಮಾರಸ್ವಾಮಿ 14 ತಿಂಗಳು ಮುಖ್ಯಮಂತ್ರಿಯಾಗಿದ್ದರು. ನಾವು ಸುಮ್ಮನೆ ಕೂರಲ್ಲ. ನಮಗೂ ಏನು ಮಾಡಬೇಕೆಂದು ಗೊತ್ತಿದೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಈವರೆಗೆ ಹಾಸನ ಜಿಲ್ಲೆಯ ರಾಜಕೀಯ ಮಾಡುತ್ತಿದ್ದೆ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಜೊತೆ ರಾಜ್ಯದಲ್ಲಿ ರಾಜಕೀಯ ಮಾಡುತ್ತೇನೆ. ದೇವೇಗೌಡರ ಮಕ್ಕಳು ಏನು ಎಂಬುದನ್ನು ತೋರಿಸುತ್ತೇವೆ ಎಂದರು.
ದೇವೇಗೌಡರು ಎಲ್ಲ ತನಿಖೆಯನ್ನೂ ಹೆದರಿಸಿ ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಸೇರಿ ದೇವೇಗೌಡರ ಕುಟುಂಬ ಟಾರ್ಗೆಟ್ ಮಾಡಿದ್ದಾರೆ. ಎರಡೂ ಪಕ್ಷದವರೂ ಏನು ಮಾಡುತ್ತಾರೋ ಮಾಡಲಿ ಎಂದು ಸವಾಲು ಹಾಕಿದರು. ಫೋನ್ ಕದ್ದಾಲಿಕೆ ಪ್ರಕರಣವೇ ಜೆಡಿಎಸ್ನ ಮುಂದಿನ ಭದ್ರ ಬುನಾದಿಯಾಗಿದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ಸರ್ಕಾರದಲ್ಲೂ ನಡೆದ ಫೋನ್ ಟ್ಯಾಪಿಂಗ್ ಅನ್ನು ತನಿಖೆ ಮಾಡಲಿ ಎಂದು ಒತ್ತಾಯಿಸಿದರು.
Advertisement