ಬಿಜೆಪಿ ಪ್ರಯೋಜಿತ ದಾಳಿ: ಐಟಿ ದಾಳಿ ಕುರಿತು ಕೋಳಿವಾಡ ಆಕ್ರೋಶ

ತಮ್ಮ ಮನೆ ಮೇಲೆ ಆಗಿರುವ ಐಟಿ ದಾಳಿ ಕುರಿತು ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬಿಜೆಪಿ ಪ್ರಾಯೋಜಿತ ದಾಳಿ ಎಂದು ಕಿಡಿಕಾರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾವೇರಿ: ತಮ್ಮ ಮನೆ ಮೇಲೆ ಆಗಿರುವ ಐಟಿ ದಾಳಿ ಕುರಿತು ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬಿಜೆಪಿ ಪ್ರಾಯೋಜಿತ ದಾಳಿ ಎಂದು ಕಿಡಿಕಾರಿದ್ದಾರೆ.

ಐಟಿ ದಾಳಿ ಬಳಿಕ ಮನೆಗೆ ಬಂದಿದ್ದ ಅಧಿಕಾರಿಗಳು ಖಾಲಿ ಕೈಯಲ್ಲಿ ವಾಪಸ್ ಆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೋಳಿವಾಡ ಅವರು, ಬಿಜೆಪಿ ಐಟಿ ಇಲಾಖೆಯನ್ನು ತನ್ನ ರಾಜಕೀಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದೆ. ತಮ್ಮ ಮನೆ ಮೇಲಿನ ಐಟಿ ದಾಳಿ ಬಿಜೆಪಿ ಪ್ರಾಯೋಜಿತವಾದದ್ದು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಈ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ ನಾಯಕರು, ಅನುಕಂಪಕ್ಕಾಗಿ ಕೋಳಿವಾಡ ಅವರೇ ದಾಳಿ ಮಾಡಿಸಿಕೊಂಡಿದ್ದಾರೆ. ಚುನಾವಣೆ ಮುನ್ನ ಐಟಿ, ಅಬಕಾರಿ ದಾಳಿ ಮಾಡಿರುವುದು ಚುನಾವಣಾ ಗಿಮಿಕ್ ಎಂದು ಟೀಕಿಸಿದ್ದಾರೆ.

ಇನ್ನು ಐಟಿ ದಾಳಿಯಿಂದ ರೊಚ್ಚಿಗೆದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೋಳಿವಾಡ ಮನೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com