ಕೈಗೆ ಮತ್ತೆ ಐಟಿ ಬಿಸಿ; ಕೆಬಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ, ಪರಿಶೀಲನೆ ಬಳಿಕ ಅಧಿಕಾರಿಗಳು ವಾಪಸ್

ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದು, ಕೆಬಿ ಕೋಳಿವಾಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾವೇರಿ: ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದು, ಕೆಬಿ ಕೋಳಿವಾಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೆಬಿ ಕೋಳಿವಾಡ ಅವರ ರಾಣೆಬೆನ್ನೂರು ಮನೆ ಮೇಲೆ ಐಟಿ ಅಧಿಕಾರಿಗಳು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. 

ಮೂಲಗಳ ಪ್ರಕಾರ ಅಕ್ರಮ ಹಣ, ಅಪಾರ ಪ್ರಮಾಣ ಮದ್ಯ ಇರುವ ಮಾಹಿತಿ ಮೇರೆಗೆ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಇಲ್ಲಿನ ವಾಗೀಶ್ ನಗರ 6ನೇ ಕ್ರಾಸ್ ಬಳಿ ಇರುವ ಕೋಳಿವಾಡ ಮನೆಗೆ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದಾರೆ. ಒಂದು ಗಂಟೆಗಳ ಕಾಲ ಮನೆಯಲ್ಲಾ ಜಾಲಾಡಿ ಪರಿಶೀಲನೆ ನಡೆಸಿದರು ಎಂದು ಹೇಳಲಾಗಿದೆ. 

ಸಾರ್ವಜನಿಕರ ದೂರು ಆಧರಿಸಿ ಅಬಕಾರಿ ಹಾಗೂ ಐಟಿ ತಂಡ ಜಂಟಿ ದಾಳಿ ನಡೆಸಿ ತನಿಖೆ ಕೈಗೊಂಡರು. ಆದರೆ ದಾಳಿ ವೇಳೆಯಾವುದೇ ರೀತಿಯ ಹಣ, ಮದ್ಯ ಸಿಗದೇ ಅಧಿಕಾರಿಗಳು ವಾಪಸ್ ಹೋದರು ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com