ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮøತಿ ಇರಾನಿ ಅವರ ವಿರುದ್ಧ ಅಶಿಸ್ತು ಪ್ರದರ್ಶಿಸಿದ ಕೇರಳದ ಇಬ್ಬರು ಕಾಂಗ್ರೆಸ್ ಸಂಸದರು ಬೇಷರತ್ ಕ್ಷಮೆ ಕೋರಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಪಟ್ಟು ಹಿಡಿದಿದ್ದರಿಂದ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಕಾಂಗ್ರೆಸ್ನ ಟಿ.ಎನ್.ಪ್ರತಾಪನ್ ಮತ್ತು ಡೀನ್ಕುರಿಯಕೊಸ್ ಅವರು ಬೇಷರತ್ ಕ್ಷಮೆ ಕೋರಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಎಎಪಿ, ಬಿಜು ಜನತಾ ದಳ ಸೇರಿದಂತೆ ಆಡಳಿತ ಪಕ್ಷಗಳ ಸದಸ್ಯರು ಒತ್ತಾಯಿಸಿದರು.
ಕಾಂಗ್ರೆಸ್ ಸದಸ್ಯರು ಸದನಕ್ಕೆ ಹಾಜರಾಗುವಂತೆ ಕಾಂಗ್ರೆಸ್ ಸಭಾ ನಾಯಕ ಅಧಿರ್ ರಂಜನ್ ಚೌಧರಿ ಸೂಚಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
Advertisement