ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲೇ ಬಿಜೆಪಿಗೆ ಕರೆತರುವೆ: ರಮೇಶ್ ಜಾರಕಿಹೊಳಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲಿಯೇ ಬಿಜೆಪಿಗೆ ಕರೆ ತರುತ್ತೇನೆಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಗೋಕಾಕ್: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲಿಯೇ ಬಿಜೆಪಿಗೆ ಕರೆ ತರುತ್ತೇನೆಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರನ್ನೂ ಬಿಜೆಪಿಗೆ ಕರೆ ತರುತ್ತೇವೆ. ಸಿದ್ದರಾಮಯ್ಯ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿಲ್ಲ. ಟೀಕೆ ಮಾಡಿದ್ದರೆ ನಾನು ಬಿಡುತ್ತಿರಲಿಲ್ಲ ಎಂದು ಹೇಳಿದ್ದಾರೆ. 

ಉಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ನನ್ನ ಗುರುವಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅವರು ನೀಡಿರುವ ಈ ಹೇಳಿಕೆಗೆ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com