ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬಂದವರು ಗೋಲಿ ಆಡುವ ಹುಡುಗರಲ್ಲ: ಡಿಸಿಎಂ ಕಾರಜೋಳ

ಕಾಂಗ್ರೆಸ್ಸಿಗರು ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಂಡಿದ್ದರೆ ಅವರೇಕೆ ಪಕ್ಷ ಬಿಟ್ಟು ಬಿಜೆಪಿಗೆ ಬರುತ್ತಿದ್ದರು ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಪರೇಷನ್ ಕಮಲ ಮುಂದುವರಿಸಿದಲ್ಲಿ...
ಗೋವಿಂದ್ ಕಾರಜೋಳ
ಗೋವಿಂದ್ ಕಾರಜೋಳ

ಬಾಗಲಕೋಟೆ: ಕಾಂಗ್ರೆಸ್ಸಿಗರು ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಂಡಿದ್ದರೆ ಅವರೇಕೆ ಪಕ್ಷ ಬಿಟ್ಟು ಬಿಜೆಪಿಗೆ ಬರುತ್ತಿದ್ದರು ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಪರೇಷನ್ ಕಮಲ ಮುಂದುವರಿಸಿದಲ್ಲಿ ಜನ ಅಟ್ಟಾಡಿಸಿಕೊಂಡು ಹೋಡೆಯುತ್ತಾರೆ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಮುಧೋಳ ತಾಲೂಕು ಯಡಹಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತಮ್ಮ ಪಕ್ಷದ ಶಾಸಕರನ್ನು  ಸರಿಯಾಗಿ ಇಟ್ಟುಕೊಳ್ಳದ ಹಿನ್ನೆಲೆಯಲ್ಲಿ ೧೭ ಜನ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬಂದಿದ್ದಾರೆ. ಅವರೆಲ್ಲ ಗೋಲಿ ಆಡುವವರಲ್ಲ. ಜವಾಬ್ದಾರಿ ಇದ್ದವರು. ನಾಲ್ಕಾರು ಬಾರಿ ಶಾಸಕರಾಗಿ ಆಯ್ಕೆಯಾದವರು. ಅವರೆಲ್ಲ ಮನನೊಂದು ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆ. ಯಾರೂ ಹುಡುಗಾಟಿಕೆಗೆ ರಾಜೀನಾಮೆ ಕೊಡುವುದಿಲ್ಲ. ರಾಜೀನಾಮೆ ಕೊಟ್ಟು ಜನರ ಮಧ್ಯೆ ಆಯ್ಕೆಗೊಳ್ಳುವುದು ಅಂದುಕೊಂಡಷ್ಟು ಸುಲಭವಲ್ಲ. ಇದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮುಂದಿನ ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಭದ್ರವಾಗಿರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಉಪ ಚುನಾವಣೆಯಲ್ಲಿ ೧೫ ಕ್ಕೆ ೧೫ ಸ್ಥಾನ ಗೆಲ್ಲುತ್ತೇವೆ. ಈ ಹಿಂದೆಯೂ ಈ ಮಾತು ಹೇಳಿದ್ದೆ, ಈಗಲೂ ಹೇಳುವೆ. ಅದರಲ್ಲಿ ಬದಲಾವಣೆ ಇಲ್ಲ ಎಂದರು.

ಸಚಿವ ಸ್ಥಾನಕ್ಕಾಗಿ ನಡೆದಿರುವ ಪೈಪೋಟಿ ಕುರಿತು ಮಾತನಾಡಿದ ಅವರು, ಸಚಿವ ಸ್ಥಾನ ಕೊಡುವುದು ಬಿಡುವುದು ನಮ್ಮ ಕೈಯಲ್ಲಿ ಇಲ್ಲ. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಈ ಕುರಿತಂತೆ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪಕ್ಷದ ಮುಖಂಡರೊಮದಿಗೆ ಸಮಾಲೋಚನೆ ಮಾಡಿ ಯಾರನ್ನು ಮಂತ್ರಿ ಮಾಡಬೇಕು ಎನ್ನುವುದನ್ನು ತೀರ್ಮಾನಿಸುತ್ತಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com