ಉಪ ಚುನಾವಣೆ ಫಲಿತಾಂಶ: ಹುಣಸೂರಿನಲ್ಲಿ ಮಂಜುನಾಥ್, ಕೆ. ಆರ್. ಪೇಟೆಯಲ್ಲಿ ನಾರಾಯಣಗೌಡ ಮುನ್ನಡೆ 

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಸುತ್ತಿನಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಹೆಚ್. ವಿಶ್ವನಾಥ್, ಮಂಜುನಾಥ್, ಸೋಮಶೇಖರ್
ಹೆಚ್. ವಿಶ್ವನಾಥ್, ಮಂಜುನಾಥ್, ಸೋಮಶೇಖರ್

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಸುತ್ತಿನಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.  ಕಾಂಗ್ರೆಸ್ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಹುಣಸೂರು ಕ್ಷೇತ್ರದಲ್ಲಿ 10 ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ 20, 821 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಂಜುನಾಥ್ ಒಟ್ಟಾರೇ 55, 217  ಮತಗಳನ್ನು  ಪಡೆದಿದ್ದರೆ,  ಬಿಜೆಪಿ ಅಭ್ಯರ್ಥಿ ಎಚ್ ವಿಶ್ವನಾಥ್ 34,396  ಜೆಡಿಎಸ್ ಅಭ್ಯರ್ಥಿ ಬಿ ಸೋಮಶೇಖರ್ 20, 636 ಮತಗಳನ್ನು ಪಡೆದುಕೊಂಡಿದ್ದಾರೆ.

ಕೆ. ಆರ್. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com