ಗೌಡರ ಕುಟುಂಬದ ವಿರುದ್ದ ತಿರುಗಿ ಬಿದ್ದವರು ಮಣ್ಣಾಗಿದ್ದಾರೆ: ಸಿಎಸ್ ಪುಟ್ಟರಾಜು

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ತಿರುಗಿ ಬಿದ್ದವರು ಮಣ್ಣಾಗಿ ಹೋಗಿದ್ದಾರೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.
ಕುಮಾರಸ್ವಾಮಿ-ದೇವೇಗೌಡ-ಪುಟ್ಟರಾಜು
ಕುಮಾರಸ್ವಾಮಿ-ದೇವೇಗೌಡ-ಪುಟ್ಟರಾಜು

ಮಂಡ್ಯ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ತಿರುಗಿ ಬಿದ್ದವರು ಮಣ್ಣಾಗಿ ಹೋಗಿದ್ದಾರೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

ಗೌಡರ ಕುಟುಂಬದ ವಿರುದ್ಧ ಹರಿ ಹಾಯುತ್ತಿರುವ ಕೆ.ಆರ್.ಪೇಟೆ ನೂತನ ಬಿಜೆಪಿ ಶಾಸಕ ನಾರಾಯಣಗೌಡ ಅವರಿಗೆ ಸಿ.ಎಸ್. ಪುಟ್ಟರಾಜು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ದೇವೇಗೌಡರ ಕುಟುಂಬದ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು. ಬಿಜೆಪಿ ಶಾಸಕ ನಾರಾಯಣಗೌಡ ಮೇಲೆ ಉಗಳಿದರೆ ಅದು ತಮ್ಮ ಮುಖಕ್ಕೆ ಬಂದು ಬೀಳುತ್ತದೆ. ಆದ್ದರಿಂದ ಮಾತನಾಡುವಾಗ ಭಾಷೆ ಮೇಲೆ ಹಿಡಿತ ಇಟ್ಟುಕೊಳ್ಳುವುದು ಒಳಿತು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com