ಹೈಕಮಾಂಡ್ ಏನು ಹೇಳುತ್ತದೆಯೋ ಹಾಗೆ ಕೇಳುತ್ತೇವೆ : ರಮೇಶ್ ಜಾರಕಿಹೊಳಿ

: ಉಪಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರು ಭಾನುವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.
ಶಾಸಕರ ಪ್ರಮಾಣ ವಚನ
ಶಾಸಕರ ಪ್ರಮಾಣ ವಚನ

ಬೆಂಗಳೂರು: ಉಪಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರು ಭಾನುವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಶಾಸಕರು ಸಂತಸ ವ್ಯಕ್ತಪಡಿ ಸಿದರು. 

ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು. 

ಇದೇ ವೇಳೆ ಮಾತನಾಡಿದ ಅಥಣಿ ಶಾಸಕ ಕುಮಟಳ್ಳಿ ಕೂಡ ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೋ ಇಲ್ಲವೋ ಗೊತ್ತಿಲ್ಲ ,ಆದ್ರೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವು ದಕ್ಕೆ ರೆಡಿಯಿದ್ದೇನೆ ಎಂದು ಮುಖ್ಯಮಂತ್ರಿಗೆ ಮೆಸೇಜ್ ರವಾನಿ ಸಿದರು.

ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಹೈಕಮಾಂಡ್ ಏನು ಹೇಳುತ್ತದೆಯೋ ಹಾಗೆ ನಾವು ಕೇಳುತ್ತೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com