ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಕೆಲ ದಿನಗಳಿಂದ ಮಂಡ್ಯ ಕ್ಷೇತ್ರದಿಂದ ನಿಖಿಲ್ ಹಾಗೂ ಅಂಬರೀಷ್ ಕುಟುಂಬದ ಸದಸ್ಯರು ಸ್ಪರ್ಧಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಸುಮಲತಾ ಅಂಬರೀಶ್ ಜೆಡಿಎಸ್ ಪಕ್ಷಕ್ಕೆ ಸೇರಿದವರಲ್ಲ ಎಂದರು. ಹಾಗೊಂದು ವೇಳೆ ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಅದಕ್ಕೆ ತಮ್ಮ ವಿರೋಧವಿಲ್ಲ. ಸ್ಪರ್ಧೆ ಮಾಡುವುದು ಅವರ ವೈಯಕ್ತಿಕ ನಿರ್ಧಾರ ಎಂದರು.