ಕೋಲಾರದ ಶ್ರೀನಿವಾಸಪುರ ತಾಲೂಕಿನ ಜನ್ನಪ್ಪನಹಳ್ಳಿ ಗ್ರಾಮದಲ್ಲಿ ಗಣೇಶನ ಮೂರ್ತಿ ಹಾಗೂ ಪುಷ್ಕರಣಿ ಉದ್ಗಾಟಿಸಿ ಮಾತನಾಡಿದ ರಮೇಶ್ ಕುಮಾರ್ , ಶಾಸಕರು ರಾಜೀನಾಮೆ ನೀಡುವ ವಿಚಾರ ನನಗೇನು ಗೊತ್ತಿಲ್ಲ. ಅಧಿವೇಶನದಲ್ಲಿ ಗೈರಾದ ಶಾಸಕರ ಮೇಲೆ ಕ್ರಮಕೈಗೊಳ್ಳಲು ನಾನು ಯಾರು? ನಾಲ್ಕು ಅಲ್ಲ ನಲವತ್ತು ಮಂದಿ ಶಾಸಕರು ರಾಜೀನಾಮೆ ನೀಡಿದರೂ ನಾನು ತೆಗೆದುಕೊಳ್ಳಲು ಸಿದ್ಧವೆಂದು ಪರೋಕ್ಷವಾಗಿ ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.