ಬಂಡಾಯ ಶಾಸಕರ ಗುಂಪಿನ ನಾಯಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಚಿಂಚೊಳ್ಳಿ ಶಾಸಕ ಡಾ. ಉಮೇಶ್ ಜಾಧವ್, ಕಂಪ್ಲಿ ಶಾಸಕ ಜಿ. ಎನ್. ಗಣೇಶ್, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಮಾತ್ರವಲ್ಲದೇ, ಹಿರೆಕೆರೂರು ಶಾಸಕ ಬಿ. ಸಿ. ಪಾಟೀಲ್, ಕೂಡಾ ಕಲಾಪದಿಂದ ದೂರ ಉಳಿದಿರುವುದು ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ.