ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ತಯಾರಿ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿಲ್ಲ ಎಂದು ಮುನಿಸಿಕೊಂಡಿರುವ ಅಮಿತ್ ಶಾಗೆ ಒಂದು ಲಕ್ಷ ಬೈಕ್ ರ್ಯಾಲಿಗೆ ತಯಾರಿ ಮಾಡಿದ್ದೇವೆ ಎಂದು ಅರುಣ್ ಕುಮಾರ್ ಸಮಜಾಯಿಷಿ ನೀಡಲು ಹೋದರು. ಅರುಣ್ ಮಾತಿನಿಂದ ಸಿಟ್ಟಾದ ಅಮಿತ್ ಶಾ, ಕರ್ನಾಟಕದಲ್ಲಿ ಕೇವಲ ಒಂದು ಲಕ್ಷ ಜನರ ಬೈಕ್ ರ್ಯಾಲಿನಾ? ನೀವೆಲ್ಲಾ ಏನ್ ಮಾಡ್ತಾ ಇದ್ದೀರಿ? ಗಂಭೀರವಾಗಿ ಕೆಲಸ ಆರಂಭ ಮಾಡುವುದು ಯಾವಾಗ? ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.