ಕುಮಾರಸ್ವಾಮಿ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ನಡೆಸಿರುವ ಷಡಂತ್ರ ಇದಾಗಿದೆ. ಈ ಬಗ್ಗೆ ಸದನ ಸಮಿತಿ ರಚಿಸಿ, ನಾವು ಎಸ್ಐಟಿ ತನಿಖೆಗೆ ಆದೇಶ ಮಾಡುವುದನ್ನು ಒಪ್ಪುವುದಿಲ್ಲ. ಮೊದಲ ಅರೋಪಿ ಮುಖ್ಯಮಂತ್ರಿಯಾಗಿದ್ದು, ಅವರ ಕೈಯಲ್ಲಿ ಎಸ್ಐಟಿ ಇದೆ. ತನಿಖಾ ಸಂಸ್ಥೆ ಮುಖ್ಯಮಂತ್ರಿ ಅವರನ್ನು ಪ್ರಶ್ನೆ ಮಾಡಲು ಸಾಧ್ಯವೆ? ಅವರು ತನಿಖೆ ಎದುರಿಸಲು ಆಗುವುದಿಲ್ಲ ಎಂದು ಯಡಿಯೂರಪ್ಪ ಪ್ರತಿಪಾದಿಸಿದರು.