ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಲಾಗಿದ್ದ ಕಾಂಗ್ರೆಸ್ ನ ನಾಲ್ಕು ಬಂಡಾಯ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಮಹಾಂತೇಶ್ ಕಮಟಳ್ಳಿ, ಬಿ. ನಾಗೇಂದ್ರ ಹಾಗೂ ಜೆಡಿಎಸ್ ನಾರಾಯಣಗೌಡ ಅವರು ಬುಧವಾರ ಕೊನೆಗೂ ವಿಧಾನಸಭೆ ಕಲಾಪಕ್ಕೆ ಹಾಜರಾದರು.