ಬೆಂಗಳೂರು: ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ, ಸರ್ಕಾರ ಬೀಳಿಸುವ ಕೆಲಸ ನಾನೆಂದೂ ಮಾಡಿಲ್ಲ, ಮಾಡುವುದು ಇಲ್ಲ, ಕಾಂಗ್ರೆಸ್ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದು ಚಿಂಚೋಳಿ ಶಾಸಕ ಉಮೇಶ್ ಜಾಧವ್ ಸ್ಪಷ್ಟಪಡಿಸಿದ್ದಾರೆ.
ಕಳೆದ ಒಂದು ವಾರದಿಂದ ಕಣ್ಮರೆಯಾಗಿದ್ದ ಉಮೇಶ್ ಯಾದವ್, ಇಂದು ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಸೇರ್ಪಡೆ ಹಾಗೂ ಸರ್ಕಾರ ಬೀಳಿಸುವ ಕೆಲಸ ಮಾಡಲಾಗುತ್ತಿದೆ ಎಂಬ ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ.
ವೈಯಕ್ತಿಕ ಕಾರಣದಿಂದಾಗಿ ನಾನು ಸಿಎಲ್ ಪಿ ಸಭೆಗೆ ಬಂದಿರಲಿಲ್ಲ. ತಾನು ಕ್ಷೇತ್ರದಲ್ಲಿಯೇ ಇದ್ದೆ. ಈ ಬಗ್ಗೆ ನಾಯಕರ ಜೊತೆ ಮಾತಾನಾಡುತ್ತೇನೆ. ನಾನು ಪಕ್ಷಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯವಾಗಿ ನನ್ನ ಕ್ಷೇತ್ರದಲ್ಲಿ ಸಮಸ್ಯೆಗಳಿವೆ. ಅದನ್ನು ನಮ್ಮ ನಾಯಕರಿಗೆ ಮನವರಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇಂದು ಮುಂಜಾನೆ ಶಾಸಕರ ಭವನದಲ್ಲಿರುವ ಕೊಠಡಿಗೆ ಉಮೇಶ್ ಜಾಧವ್ ಆಗಮಿಸಿದ್ದರು.