ಈ ಹಿಂದೆ ವಿಪ್ ಜಾರಿ ಹೊರತಾಗಿಯೂ ಪಕ್ಷ ಶಾಸಕಾಂಗ ಸಭೆಗೆ ಗೈರಾಗಿದ್ದ ನಾಲ್ಕು ಶಾಸಕರ ವಿರುದ್ಧ ಸ್ಪೀಕರ್ ಗೆ ದೂರು ನೀಡಲಾಗಿತ್ತು. ಈ ಪೈಕಿ ಶಾಸಕ ರಮೇಶ್ ಜಾರಕಿಹೊಳಿ, ಶಾಸಕ ಮಹೇಶ್ ಕುಮಟಹಳ್ಳಿ ಕೂಡ ಸೇರಿದ್ದಾರೆ. ಸ್ಪೀಕರ್ ಗೆ ಪಕ್ಷದ ಮುಖಂಡರು ದೂರು ನೀಡಿದ ಬೆನ್ನಲ್ಲೇ ಶಾಸಕ ಸ್ಥಾನ ಅನರ್ಹಗೊಳ್ಳುವ ಭೀತಿಯಿಂದ ನಾಪತ್ತೆಯಾಗಿದ್ದ ಶಾಸಕರು ಒಬ್ಬೊಬ್ಬರಾಗಿ ಪ್ರತ್ಯಕ್ಷರಾಗುತ್ತಿದ್ದು, ನಿನ್ನೆ ರಮೇಶ್ ಜಾರಕಿಹೊಳಿ ಕೂಡ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.