ಬಜೆಟ್ಗೆ ಹಿಂದಿನ ದಿನ, ಅಂದರೆ ಫೆಬ್ರವರಿ 7ರ ರಾತ್ರಿ ದೇವದುರ್ಗಾದಲ್ಲಿ ಯಡಿಯೂರಪ್ಪ, ಶಿವನಗೌಡ ನಾಯಕ ಮತ್ತಿತರರನ್ನು ಭೇಟಿಯಾಗಿ ಮಾತುಕತೆ ನಡೆಸುವಾಗ ಶರಣಗೌಡ ಅವರು ಆಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಅದರಲ್ಲಿ, ಶರಣುಗೌಡ ಅವರಿಗೆ ತಮ್ಮ ತಂದೆಯನ್ನು ಬಿಜೆಪಿಗೆ ಬರಲು ಒಪ್ಪಿಸಿದರೆ ಶಾಸಕ ಹಾಗೂ ಮಂತ್ರಿಸ್ಥಾನ ಕೊಡುವುದಾಗಿ ಆಮಿಷ ಒಡ್ಡಲಾಯಿತು. ಹಾಗೆಯೇ ಕೋಟಿಗಟ್ಟಲೆ ದುಡ್ಡನ್ನೂ ತಲುಪಿಸುವುದಾಗಿ ಭರವಸೆ ನೀಡಲಾಗಿದ್ದು, ಅದರ ಆಡಿಯೋ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.