ಕಾಂಗ್ರೆಸ್ ನ ಪ್ರಸಿದ್ದ ನಾಯಕರಾದ ದಿನೇಶ್ ಗುಂಡೂರಾವ್, ಜಿ ಪರಮೇಶ್ವರ್, ಮತ್ತು ಸಿದ್ದರಾಮಯ್ಯ ಒಗ್ಗಟ್ಟಾಗಿ ಲೋಕಸಭೆ ಚುನಾವಣಾ ಪ್ರಚಾರ ಮಾಡಬೇಕಿದೆ, ಮೂಲಗಳ ಪ್ರಕಾರ ಇತ್ತೀಚೆಗೆ ಒಕ್ಕಲಿಗ ಸಮುದಾಯದ ಮುಖಂಡರು ಸಭೆ ಸೇರಿ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಗೆಲ್ಲಿಸಲು ಚರ್ಚೆ ನಡೆಸಿದ್ದಾರೆ, ಒಂದು ವೇಳೆ ಜೆಡಿಎಸ್ ಒಕ್ಕಲಿಗ ಮತಗಳನ್ನು ವರ್ಗಾಯಿಸಲು ವಿಫಲವಾದರೇ ಕಾಂಗ್ರೆಸ್ ಗೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.