ಮಂಡ್ಯ ಜಿಲ್ಲೆಯ ಚಿಕ್ಕರಸಿನಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಬಳಿಕ ಬಸವನ ಆಶೀರ್ವಾದ ಪಡೆದು, ಕಾಣಿಕೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರನ್ನು ನೀವು ನೋಡಿಕೊಂಡಿದ್ದೀರಿ, ಸಾಕಿದ್ದೀರಿ, ಬೆಳೆಸಿದ್ದೀರಿ. ಆ ಒಂದು ಪ್ರೀತಿಯ ಋಣ ನಮ್ಮಲ್ಲಂತೂ ಇದ್ದೇ ಇದೆ. ಆ ಋಣ ತೀರಿಸಲು ಅವಕಾಶ ಸಿಕ್ಕರೆ ಖಂಡಿತಾ ನಾನು ಅದನ್ನು ನೆರವೇರಿಸುತ್ತೇನೆ ಎಂದು ಹೇಳಿದ್ದಾರೆ.