ಜಿ.ಟಿ.ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಮೈತ್ರಿ ಮುಂದುವರಿಸಲು ನಿರ್ಧರಿಸಲಾಗಿದೆ. ಪಕ್ಷದ ಸದಸ್ಯರೊಂದಿಗೆ ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರವನ್ನು ಇಂದು ತೆಗೆದುಕೊಂಡಿಲ್ಲ. ಈ ಹಿಂದೆಯೇ ತೀರ್ಮಾನವನ್ನು ತೆಗೆದುಕೊಳ್ಳಲಾಗಿತ್ತು. ಜೆಡಿಎಸ್ ಸದಸ್ಯರು ಬಿಜೆಪಿ ಜೊತೆಗಿನ ಮೈತ್ರಿಯ ಪರವಾಗಿ ಒಲವು ತೋರಿದ್ದಾರೆ ಎಂದು ಹೇಳಿದರು.