ಉಪಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರ ಮೇಲೆ ಒತ್ತಡ ತಂದು ಚುನಾವಣೆಗೆ ನಿಲ್ಲಿಸಿದ್ದೆವು. ಅವರಿಗೆ ಹೆಚ್ಚಿನ ಸಮಯ ಸಹ ಇರಲಿಲ್ಲ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ನಾವು ಎಲ್ಲರೂ ಸೇರಿ ಪ್ರಯತ್ನ ಪಟ್ಟೆವು ಆದರೆ ಕಡಿಮೆ ಅಂತರದಲ್ಲಿ ಮಧು ಬಂಗಾರಪ್ಪ ಸೋತರು, ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಪರಾಮರ್ಶೆ ನಡೆಸಲಾಗಿದೆ. ಈ ಬಾರಿ ಹಾಗೆ ಆಗುವುದಿಲ್ಲ ಮಧು ಅವರು ಗೆಲ್ಲುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.