ನಾಲ್ವರು ಖ್ಯಾತ ನಟರಾದ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಯಶ್ ಹಾಗೂ ಸುದೀಪ್ ಮತ್ತು ನಿರ್ಮಾಪಕರಾದ ಸಿ ಆರ್ ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆ ಮೇಲೆ ನಡೆದ ಐಟಿ ದಾಳಿ ಬಗ್ಗೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಈ ದಾಳಿ ರಾಜಕೀಯ ಪ್ರೇರಿತ ಎಂದು ಹೇಳುವ ಬದಲು, ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ ಎಂದರೆ ಸರಿ ಎಂದರು.