ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಈ ನೇಮಕಾತಿಗಳನ್ನು ಮಾಡಲಾಗಿತ್ತು, ಆದರೆ ನಿಗಮ- ಮಂಡಳಿಯಂದ ತಮ್ಮ ಹೆಸರು ಕೈ ಬಿಟ್ಟಿದ್ದಕ್ಕೆ ಹಲವರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ,. ನಿಗಮ ಮಂಡಳಿಗಳ ಪೈಕಿ ಬಿಡಿಎಗೆ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರ ಹೆಸರನ್ನು ಸೂಚಿಸಲಾಗಿತ್ತು. ಆದರೆ, ಈ ಆದೇಶಕ್ಕೆ ಸಿಎಂ ಕುಮಾರಸ್ವಾಮಿ ಸಹಿ ಹಾಕಿಲ್ಲ. ಹೀಗಾಗಿ ಸಿಎಂ ವಿರುದ್ಧ ಸೋಮಶೇಖರ್ ಕೆಂಡಾಮಂಡಲವಾಗಿದ್ದಾರೆ, ನಾವು ಸ್ಥಾನಕ್ಕಾಗಿ ಯಾರನ್ನೂ ಕೇಳಿರಲಿಲ್ಲ. ಆದರೆ ಈಗ ನಮ್ಮ ಹೆಸರನ್ನು ತಡೆಹಿಡಿರುವುದು ನಮಗೆ ಮಾಡಿರುವ ಅವಮಾನವಾಗಿದೆ ಎಂದು ಆರೋಪಿಸಿದ್ದಾರೆ.