ಸರಕಾರದ ದಿಲ್ಲಿ ಪ್ರತಿನಿಧಿ (ಡಾ.ಅಜಯ್ ಸಿಂಗ್), ಯೋಜನಾ ಆಯೋಗ ಉಪಾಧ್ಯಕ್ಷ ಸ್ಥಾನ (ಶರಣಬಸಪ್ಪ ದರ್ಶನಾಪುರ) ನೇಮಕದ ಸಾಧ್ಯತೆಯಿದೆ. ಆದರೆ, ಸಚಿವ ರೇವಣ್ಣ ವಿರೋಧ ಇರುವುದರಿಂದ ಹಾಸನ ಜಿಲ್ಲೆಯ ಕಾಂಗ್ರೆಸ್ ಎಂಎಲ್ಸಿ ಗೋಪಾಲಸ್ವಾಮಿ ಅವರಿಗೆ ಸಂಸದೀಯ ಕಾರ್ಯದರ್ಶಿ ಸ್ಥಾನ ದೊರಕುವುದು ಅನುಮಾನ. ಹಾಗೆಯೇ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಆರ್ಡಿಸಿಎಲ್ ಅಧ್ಯಕ್ಷ ಸ್ಥಾನಕ್ಕೆ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ.