ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತದೆಯೆ ಎಂಬ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ "ಇದನ್ನು ಹೇಳೋಕೆ ನಾನೇನು ಭವಿಷ್ಯಕಾರನಲ್ಲ. ಸದ್ಯದ ಪರಿಸ್ಥಿತಿ ನೋಡಿದರೆ ಸರ್ಕಾರ ಹೆಚ್ಚು ದಿನ ಉಳಿಯೋ ಹಾಗೆ ಕಾಣುತ್ತಿಲ್ಲ. ಆದರೆ ಸಂಕ್ರಾಂತಿಯಾಗಲಿ, ಯುಗಾದಿಯಾಗಲಿ ಕಳೆದ ಬಳಿಕ ಶುಭಸುದ್ದಿ ಬರತ್ತೆ ಎನ್ನುವುದು ಕೇವಲ ವದಂತಿ. ನಾವೆಂದೂ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸಲ್ಲ" ಎಂದಿದ್ದಾರೆ.