ಬಿಜೆಪಿಯವರು ಕಾಂಗ್ರೆಸ್ ಅತೃಪ್ತ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದರೆ, ಕಾಂಗ್ರೆಸ್, ಬಿಜೆಪಿಯ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ. ಒಂದು ವೇಳೆ ಕಾಂಗ್ರೆಸ್ ನ ಅತೃಪ್ತರು ರಾಜೀನಾಮೆ ನೀಡಿ, ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದರೆ, ನಾಳೆಯೇ ಬಿಜೆಪಿಯ ಐವರು ಶಾಸಕರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು, ಬಹುಮತ ಸಾಬೀತಿಗೆ ಬೇಕಾದ ನಂಬರ್ ಸಿಗದಂತೆ ಮಾಡಬೇಕಾಗುತ್ತದೆ ಎಂದು ಎಐಸಿಸಿ ಉನ್ನತ ಮೂಲಗಳು ತಿಳಿಸಿವೆ.