ಈ ಹಿಂದೆ ಈ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆಯಾದರೂ, ಸ್ವತಃ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಹೆಸರೂ ಕೂಡ ಬಲವಾಗಿ ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಅವರು ಇತ್ತೀಚೆಗೆ ಮಂಡ್ಯದ ಮದ್ದೂರು ತಾಲೂಕಿನ ಕೆಎಂದೊಡ್ಡಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿ, ನನ್ನ ಸ್ಪರ್ಧೆ ಕುರಿತು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಒಂದು ವೇಳೆ ಮಂಡ್ಯದಿಂದ ದೇವೇಗೌಡರು ಸ್ಪರ್ಧಿಸಿದರೆ, ಅವರ ಗೆಲುವು ಸಾಮಾನ್ಯವಾಗಿರಬಾರದು. ಅಭೂತಪೂರ್ವ ಗೆಲುವಾಗಿರಬೇಕು. ಇದಕ್ಕಾಗಿ ನಾನು ಕೂಡ ನಿಮ್ಮೊಂದಿಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.