ಇತ್ತೀಚೆಗೆ ಮಂಡ್ಯದ ಸರ್ಎಂವಿ ಕ್ರೀಡಾಂಗಣದಲ್ಲಿ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘ ಆಯೋಜಿಸಿದ್ದ ಅಂಬರೀಷ್ ಪುಣ್ಯಸ್ಮರಣೆ, ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಯಾಂಡಲ್ ವುಡ್ ನ ದಿಗ್ಗಜ ಗಣ್ಯರು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮಾಧ್ಯಮವೊಂದರ ವರದಿ ಅನ್ವಯ ಅಂಬರೀಷ್ ಪುಣ್ಯ ಸ್ಮರಣೆ ಕಾರ್ಯಕ್ರಮದ ಬಳಿಕ ಸಭೆ ಸೇರಿದ್ದ ಸ್ಯಾಂಡಲ್ ವುಡ್ ಗಣ್ಯರು, ಒಂದು ವೇಳೆ ಮಂಡ್ಯದಿಂದ ಸುಮಲತಾ ಅವರು ಸ್ಪರ್ಧಿಸಿದ್ದೇ ಆದರೆ ನಾವೆಲ್ಲರೂ ಒಗ್ಗೂಡಿ ಅವರ ಗೆಲುವಿಗೆ ಶ್ರಮಿಸೋಣ ಎಂಬ ಒಕ್ಕೋರಲಿನ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.