ಹಾವೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಮಾತನಾಡಿದ ಸಿದ್ದರಾಮಯ್ಯ ಅವರು, ಮೈತ್ರಿ ಸರ್ಕಾರ ಬಿಳುತ್ತೇ ಎಂದು ಬಿಜೆಪಿ ನಾಯಕರು ಹಗಲುಕನಸು ಕಾಣುತ್ತಿದ್ದಾರೆ. ಮೊದಲಿನಂತೆ ಪ್ರಯತ್ನ ಮಾಡಿ ಮತ್ತೇ ಮುಖಭಂಗ ಮಾಡಿಕೊಳ್ಳಲಿದ್ದಾರೆ ಎಂದು ಹೇಳಿದರು. ಅಂತೆಯೇ ನಮ್ಮ ಸಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವ ಶಾಸಕರು ಬಿಜೆಪಿಗೆ ಹೋಗಲ್ಲ. ಈ ಹಿಂದೆ ಯಡಿಯೂರಪ್ಪ ಬಹುಮತವಿಲ್ಲದೇ ಸರ್ಕಾರ ರಚಿಸಿ ಮುಖಭಂಗ ಮಾಡಿಸಿಕೊಂಡಿದ್ದಾರೆ. ಮತ್ತೆ ಅಂತಹುದೇ ಪರಿಸ್ಥಿತಿ ಮುಖಭಂಗ ಅವರಿಗೆ ಎದುರಾಗಲಿದೆ ಎಂದು ಹೇಳಿದರು.ಟ