ದೆಹಲಿಯಲ್ಲಿ ಬಿಜೆಪಿ ಶಾಸಕರ ಜೊತೆ ಬೀಡು ಬಿಟ್ಟಿರುವ ಯಡಿಯೂರಪ್ಪ ಸುದ್ದಿಗಾರರ ಜತೆ ಮಾತನಾಡುತ್ತ, ಕಾಂಗ್ರೆಸ್, ಜೆಡಿಎಸ್ ಆಡಳಿತ ನಡೆಸಲು ಸಂಪೂರ್ಣವಾಗಿ ವಿಫಲವಾಗಿದೆ. ನಾವು ಆಪರೇಷನ್ ಕಮಲದ ಪ್ರಯತ್ನಕ್ಕೆ ಕೈ ಹಾಕಿಲ್ಲ ಎಂದು ಹೇಳಿದ್ದರು. ಆದರೆ ಇಂದು ಮಧ್ಯಾಹ್ನ ಕರ್ನಾಟಕಕ್ಕೆ ಆಗಮಿಸಬೇಕಿದ್ದ ಶಾಸಕರು ದಿಢೀರ್ ನಿರ್ಧಾರ ಬದಲಿಸಿ ಗುರುಗ್ರಾಮದ ರೆಸಾರ್ಟ್ ನಲ್ಲಿ ಬೀಡು ಬಿಟ್ಟಿರುವುದೇಕೆ ಎಂಬ ಪ್ರಶ್ನೆ ಕೂಡ ಉದ್ಭವವಾಗಿದೆ.