ಇನ್ನು ಈ ವಿಚಾರ ಮಾಧ್ಯಮಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದಂತೆಯೇ ಮಾಧ್ಯಮಗಳಿಗೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಡಿಕೆ ಶಿವಕುಮಾರ್, ರೆಸಾರ್ಟ್ ನಲ್ಲಿ ಯಾವುದೇ ರೀತಿಯ ಮಾರಾಮಾರಿಯಾಗಿಲ್ಲ. ಶಾಸಕಾಂಗ ಸಭೆಗೂ ಮುನ್ನವೇ ಪಕ್ಷದಲ್ಲಿದ್ದ ಎಲ್ಲ ಭಿನ್ನಾಭಿಪ್ರಾಯ ಬಗೆಹರಿದಿದೆ. ಸುಖಾಸುಮ್ಮನೆ ಸುಳ್ಳು ಹಬ್ಬಿಸುವುದು ಬೇಡ. ಆನಂದ್ ಸಿಂಗ್ ಅವರು ಅವರ ಸಂಬಂಧಿಕರ ಮದುವೆಗೆ ತೆರಳಿದ್ದು, ಇನ್ನು 2-3 ಗಂಟೆಯಲ್ಲಿ ಬರುತ್ತಾರೆ. ಬಂದ ಮೇಲೆ ನೀವೇ ಕೇಳಿ ಎಂದು ಮಾರಾಮಾರಿ ಸುದ್ದಿಯನ್ನು ಅಲ್ಲಗಳೆದಿದ್ದಾರೆ.