ಬೆಂಗಳೂರು: ಪ್ರಿಯಾಂಕಾ ಗಾಂಧಿ ವಾದ್ರಾ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿರುವುದು ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಹೊಸ ಹುರುಪನ್ನು ತಂದಿದೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆ ವೇಳೆ ಇದು ರಾಜ್ಯದಲ್ಲಿ ಕೈ ಪಕ್ಷದ ಬಲವರ್ಧನೆಗೆ ಸಹ ಕಾರಣವಾಗಲಿದೆ ಎಂದು ಅವರು ಊಹಿಸಿದ್ದಾರೆ."ಆಕೆ ಅಖಿಲ ಭಾರತ ಮಟ್ಟದ ನಾಯಕಿಯಾಗಿದ್ದಾರೆ. ನಾವು ಅವರನ್ನು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಸಹ ಕರೆತರುತ್ತೇವೆ. ಆಕೆ ಚುನಾವಣಾ ಕ್ಯಾಂಪೇನ್ ಗಳಲ್ಲಿ ಭಾಗವಹಿಸಲಿದ್ದಾರೆ" ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.