ಈ ಹಿಂದೆ ದೇವೇಗೌಡ ಮತ್ತು ಸಿಎಂ ಕುಮಾರ ಸ್ವಾಮಿ ತಮ್ಮ ಪಕ್ಷ 10-12 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬ ಸುಳಿವು ನೀಡಿದ್ದರು, ಇದಕ್ಕಾಗಿ ಮತ್ತೆ ಹಲವು ಸುತ್ತಿನ ಮಾತುಕತೆಗಳು ನಡೆಯಬೇಕಿದೆ, ನಾವು ಯಾವುದೇ ಬೇಡಿಕೆ ಇಟ್ಟಿಲ್ಲ, ಎರಡು ಪಕ್ಷಗಳುಪ್ರಮುಖ ಅಜೆಂಡಾ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಗೆಲ್ಲುವುದಾಗಿದೆ, ಹಾಗೂ ಬಿಜೆಪಿಯನ್ನು ಖಾತೆ ತೆರೆಯದಂತೆ ಮಾಡುವುದೇ ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಹೇಳಿದ್ದಾರೆ.