ಆದರೀಗ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ತೆರೆದಿದ್ದ ಕಚೇರಿಯನ್ನು ಆನಂದ್ ಸಿಂಗ್ ಅಭಿಮಾನಿಗಳೇ ತೆರವುಗೊಳಿಸಿದ್ದಾರೆ. ಅಲ್ಲಿದ್ದ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದ್ದು, ಬಾಡಿಗೆಗೆ ಪಡೆದಿದ್ದ ಕಚೇರಿಯನ್ನೂ ಮರಳಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಮೊದಲ ಹಂತವಾಗಿ ಶಾಸಕರಾದ ಆನಂದ್ ಸಿಂಗ್ ಹಾಗೂ ಭೀಮಾನಾಯ್ಕ್ ಇಬ್ಬರೂ ತಾವು ಸೈಲೆಂಟಾಗಿರುವ ಸೂಚನೆಯನ್ನು ಬೆಂಬಲಿಗರಿಗೆ ನೀಡಿದ್ದಾರೆ.