ನಮಗೆ ಬಂದಿರುವ ಮಾಹಿತಿ ಪ್ರಕಾರ, ಕಾಂಗ್ರೆಸ್, ಜೆಡಿಎಸ್ ನಲ್ಲಿ 20 ಕ್ಕೂ ಹೆಚ್ಚು ಅತೃಪ್ತ ಶಾಸಕರಿದ್ದಾರೆ, ಅವರು ಯಾವ ನಿಲುವು ತೆಗೆದುಕೊಳ್ಳಲಿದ್ದಾರೆ ಎನ್ನುವುದರ ಮೇಲೆ ಸರ್ಕಾರದ ಭವಿಷ್ಯ ನಿರ್ಧಾರವಾಗಲಿದೆ, ಆದರೆ ಸರ್ಕಾರ ಪತನಗೊಂಡರೆ ಯಾವುದೇ ಕಾರಣಕ್ಕೂ ಚುನಾವಣೆಗೆ ಹೋಗುವುದಿಲ್ಲ. ಅಂತಹ ಸ್ಥಿತಿ ಬಂದರೆ ನಾವು ಸರ್ಕಾರ ರಚಿಸಿ ಒಳ್ಳೆಯ ಆಡಳಿತ ನೀಡುತ್ತೇವೆ ಎಂದು ಬಿಜೆಪಿ ಸರ್ಕಾರ ರಚನೆಯ ಸುಳಿವು ನೀಡಿದರು.