ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಭಾಧ್ಯಕ್ಷರಿಗೆ ತಾವು ರಾಜೀನಾಮೆ ಸಲ್ಲಿಸಿದ್ದು, ಅಗತ್ಯವಿದ್ದಲ್ಲಿ ಮತ್ತೊಮ್ಮೆ ತ್ಯಾಗ ಪತ್ರ ಸಲ್ಲಿಸಲು ಸಿದ್ಧ. ಬಳ್ಳಾರಿ ಜಿಲ್ಲೆಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸದಿದ್ದರೆ ತಾವು ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಕ್ಕೆ ಯಾವುದೇ ಪ್ರಯೋಜನವಾಗುವುದಿಲ್ಲ. ಜಿಲ್ಲೆಯ ಜನರಿಗೆ ಅನ್ಯಾಯವಾಗುತ್ತಿದ್ದು, ಆ ಬಗ್ಗೆ ಧ್ವನಿಯೆತ್ತುತ್ತಿದ್ದೇನೆ ಎಂದರು.