ಬಿಜೆಪಿ ನಾಯಕರು ಕೆಲ ಶಾಸಕರನ್ನು ಬೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆಯ ಕುತಂತ್ರ ರಾಜಕಾರಣವನ್ನು ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರಕ್ಕೆ ಬಹುಮತವಿದೆ. ರಾಜಕಾರಣದಲ್ಲಿ ಅಂತಹ ಪರಿಸ್ಥಿತಿಗಳು ಎದುರಾದರೆ ಎದುರಿಸುವ ಶಕ್ತಿ ಸಾಮರ್ಥ್ಯ ನಮಗೆ ಇದೆ. ಅವಶ್ಯಕತೆ ಬಿದ್ದರೆ ತಿರುಗೇಟು ನೀಡಲೂ ನಾವು ಸಿದ್ದರಿದ್ದೇವೆ. ಅವರ ಪ್ರಯತ್ನ ಮುಂದುವರೆಸಿದರೆ ತಕ್ಕ ಉತ್ತರವನ್ನು ಹೇಗೆ, ಯಾವಾಗ, ನೀಡಬೇಕೋ ಎಂಬುದು ನಮಗೂ ತಿಳಿದಿದೆ ಎಂದು ದಿನೇಶ್ ಗುಂಡೂರಾವ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.