ಹಣಕ್ಕಾಗಿ ರಮೇಶ್ ಜಾರಕಿಹೊಳಿ ಮಾರಾಟವಾಗಿದ್ದಾರೆ ಎಂಬ ಉದ್ದೇಶದಲ್ಲಿಯೇ ಮಾತನಾಡಿದ ಶಾಸಕ ಕೆ ಮಹದೇವ್ , ಬಿಜೆಪಿಯ ಕೆಲವು ಮುಖಂಡರು ತಮಗೂ 30 ರಿಂದ 40 ಕೋಟಿ ರೂಪಾಯಿ ಹಣವನ್ನು ನೀಡಲು 3 ಬಾರಿ ತಮ್ಮ ಮನೆ ಬಳಿಗೆ ಬಂದಿದ್ದರು. ಆದರೆ ನಾನು ಹಣವೂ ಬೇಡ ನಿಮ್ಮ ಸಹವಾಸವೂ ಬೇಡ ಎಂದು ತಿರಸ್ಕರಿಸಿದೆ. ಹಣಕ್ಕಾಗಿ ನಮ್ಮನ್ನೇ ನಾವು ಮಾರಿಕೊಳ್ಳುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಹೇಳಿ ಕಳುಹಿಸಿದ್ದಾಗಿ ಸಭೆಯಲ್ಲಿ ಮಹದೇವ್ ಪ್ರಸ್ತಾಪಿಸಿದ್ದಾರೆ. ಎಲ್ಲ ಶಾಸಕರನ್ನು ಮುಖ್ಯಮಂತ್ರಿ ಒಟ್ಟಿಗೆ ಕರೆದೊಯ್ಯಬೇಕು. ಇಲ್ಲದಿದ್ದರೆ ರಾಜೀನಾಮೆ ಕೊಡುವುದಾಗಿ ಕುಮಾರಸ್ವಾಮಿಗೆ ಕಾಂಗ್ರೆಸ್ ಶಾಸಕರು ಬೆದರಿಸುತ್ತಾರೆ. ನಿರಂತರವಾಗಿ ಇಂತಹ ಪ್ರಸಂಗಗಳು ನಡೆಯುತ್ತಿವೆ. ದುಡ್ಡು ಕೊಡದಿದ್ದರೆ ರಾಜೀನಾಮೆ ಕೊಡುತ್ತೇವೆ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ ಎಂದು ಪರೋಕ್ಷವಾಗಿ ಶಾಸಕರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿದರು.