ಇಂದು ಜೆಪಿ ಭವನದಲ್ಲಿ ಅಲ್ಪಸಂಖ್ಯಾತ ಮುಖಂಡರ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರನ್ನು ಸಂಸತ್ತು ಪ್ರವೇಶಿಸಿದ ದಿನದಿಂದ ನೋಡಿದ್ದೇನೆ. ಅವರಲ್ಲಿ ಯುವಕರ ಹುಮ್ಮಸ್ಸು, ಹೋರಾಟ ಮಾಡುವ ಮನೋಭಾವ ಅಗಾಧವಾಗಿದೆ. ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆಗಾಗಿ ರಾಷ್ಟ್ರಾದ್ಯಂತ ಸಭೆಗಳನ್ನು ಮಾಡಿದ್ದಾರೆ. ಸಾಕಷ್ಟು ಪ್ರಯತ್ನ ಮಾಡಿದರೂ ಚುನಾವಣೆಯಲ್ಲಿ ಸೋತಿದ್ದಕ್ಕೆ ನೋವಿನಿಂದ ರಾಜೀನಾಮೆ ನೀಡಿದ್ದಾರೆ. ದೇಶದ ಜನತೆ ಮೋದಿ ಅವರಿಗೆ ಆಶೀರ್ವಾದ ಮಾಡಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಹಿನ್ನಡೆಯಾಗಿದೆ ಎಂದು ಲೋಕಸಭಾ ಚುನಾವಣೆ ಫಲಿತಾಂಶವನ್ನು ವಿಶ್ಲೇಷಿಸಿದರು.