ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಹಿಂದೆ ಕುಮಾರಸ್ವಾಮಿ, ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಹೀನಾಯವಾಗಿ ನಡೆಸಿಕೊಂಡಿದ್ದರು, ರಾಜಕೀಯದಲ್ಲಿ ಮರೆಯಾಗುವ ಹತಾಶೆಯಿಂದ ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಿಮ್ಮ ವಿಳಾಸ ಎಲ್ಲಿದೆ ಎಂದು ಜನ ತೋರಿಸಿದ್ದಾರೆ. ಯಡಿಯೂರಪ್ಪ ಶಕ್ತಿ ಏನು ಎಂಬುದು ರಾಜ್ಯಕ್ಕೆ ಗೊತ್ತಿದೆ, ಯಡಿಯೂರಪ್ಪ ಹೊರಟರೆ ಯಾವ ಬಿರುಗಾಳಿಯೂ ಅವರನ್ನು ತಡೆಯಲು ಸಾಧ್ಯವಿಲ್ಲ, ನಿಮ್ಮ ಶಾಸಕರಿಗೆ ನಿಮ್ಮ ಬಗ್ಗೆ ವಿಶ್ವಾಸವಿಲ್ಲ ಎಂದು ಕಿಡಿಕಾರಿದರು.