ಶಾಸಕ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ಮೈತ್ರಿ ಸರ್ಕಾರದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಈ ರಾಜೀನಾಮೆಯ ನಾಟಕದ ಸೂತ್ರಧಾರರು ರಾಜ್ಯದ ಬಿಜೆಪಿ ನಾಯಕರು. ಸರ್ಕಾರವನ್ನು ಮುನ್ನಡೆಸಲು ಜನರು ಅವರಿಗೆ ಅವಕಾಶ ಕೊಡಲಿಲ್ಲ. ಹೀಗಾಗಿ, ಅವರು ಹಿಂಬಾಗಿಲ ಮೂಲಕ ಅಧಿಕಾರವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಲ್ಪವಾದರೂ ಸ್ವಾಭಿಮಾನವಿದ್ದರೆ ಕೊಳಕು ರಾಜಕಾರಣ ಮಾಡುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ಸಂವಿಧಾನಬದ್ಧವಾಗಿ ನಡೆದುಕೊಳ್ಳಲು ಸೂಚಿಸಲಿ ಎಂದು ಆಕ್ರೋಶ ಹೊರಹಾಕಿದ್ದರು.